ವರುಣಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸಿಂಧ್ಯ | Oneindia Kannada

  • 7 years ago
ಜಾತ್ಯಾತೀತ ಜನತಾದಳಕ್ಕೆ ಮರಳಿರುವ ಮಾಜಿ ಸಚಿವ ಹಿರಿಯ ರಾಜಕಾರಣಿ ಪಿ.ಜಿ.ಆರ್. ಸಿಂಧ್ಯ ಅವರಿಗೆ ಪ್ರತಿಷ್ಠಿತ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಆಹ್ವಾನ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುತ್ತಿರುವ ಮೈಸೂರಿನ ವರುಣಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಪಿ.ಜಿ.ಆರ್. ಸಿಂಧ್ಯ ಕಣಕ್ಕಿಳಿಯುವ ಸಾಧ್ಯತೆ ಇದೆ. ದಶಕಕ್ಕೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದ ಹಿರಿಯ ರಾಜಕಾರಣಿ ಸಿಂಧ್ಯ ಸೋಮವಾರ ಮರಳಿ ಜೆಡಿಎಸ್‌ ಸೇರಲಿದ್ದಾರೆ. ಸಿದ್ದರಾಮಯ್ಯ ಶಕ್ತಿ ಕುಗ್ಗಿಸಲು ಸಿದ್ಧತೆ ನಡೆಸಿರುವ ಜೆಡಿಎಸ್ ವರಿಷ್ಠರು ಸಿಂಧ್ಯ ಅವರನ್ನು ವರುಣಾದಲ್ಲಿ ಕಣಕ್ಕೆ ಇಳಿಸಲು ಚಿಂತನೆ ನಡೆಸಿದ್ದಾರೆ. ಹಾಲಿ ಪ್ರತಿನಿಧಿಸುವ ವರುಣಾ ಕ್ಷೇತ್ರವನ್ನು ತಮ್ಮ ಪುತ್ರ ಡಾ. ಯತೀಂದ್ರ ಅವರಿಗೆ ಬಿಟ್ಟುಕೊಟ್ಟು, ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ. ವರುಣಾದಲ್ಲಿ ಒಕ್ಕಲಿಗರು, ಲಿಂಗಾಯಿತರು ಮತ್ತು ಹಿಂದುಳಿದ ವರ್ಗಗಳ ಮತದಾರರ ಸಂಖ್ಯೆ ಹೆಚ್ಚು. ಈ ಲೆಕ್ಕಾಚಾರದಲ್ಲಿ ಸಿಂಧ್ಯ ಅವರನ್ನು ಕಣಕ್ಕೆ ಇಳಿಸಿ, ಸಿದ್ದರಾಮಯ್ಯ ಅವರನ್ನು ಮೈಸೂರಿನಲ್ಲೇ ಕಟ್ಟಿ ಹಾಕುವ ಚಿಂತನೆ ಜೆಡಿಎಸ್‌ ವರಿಷ್ಠರದ್ದಾಗಿದೆ.

Former minister P G R Sindhia is likely to contest from the Varuna Assembly constituency in Mysuru district as the JD(S) candidate in the coming elections.

Category

🗞
News

Recommended