News Cafe | ಕೊಪ್ಪಳದಲ್ಲಿ ಭೀಕರ ಅಪಘಾತ | July 24, 2022

  • 2 years ago
ಕೊಪ್ಪಳದ ಕುಕನೂರು ತಾಲೂಕಿನ ಭಾನಾಪೂರದ ಬಳಿ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ರಾತ್ರಿ 10.30ರ ಸುಮಾರಿಗೆ ಅಪರಿಚಿತ ವಾಹನವೊಂದು ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದಿದ್ದು.. ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕುಕನೂರು ತಾಲೂಕಿನ ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ್ ಕುಟುಂಬದ ಜೊತೆ ಸಂಬಂಧಿಯ ಮಗನ ಬರ್ತ್ ಡೇ ಆಚರಿಸಲು ಕೊಪ್ಪಳಕ್ಕೆ ಬಂದಿದ್ರು. ರಾತ್ರಿ ಹುಟ್ಟುಹಬ್ಬ ಮುಗಿಸಿಕೊಂಡು ಮರಳಿ ಬಿನ್ನಾಳ ಗ್ರಾಮಕ್ಕೆ ಬರ್ತಿದ್ದ ವೇಳೆ ಅಪಘಾತವಾಗಿದೆ. ಕೊಪ್ಪದ(62), ಮೃತರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ (32), ಸಂಬಂಧಿ ಕಸ್ತೂರಮ್ಮ(20) ಮೃತಪಟ್ಟಿದ್ದು, ಚಾಲಕ ಹರ್ಷವರ್ಧನ, ಬಸವರಾಜ, ಪುಟ್ಟರಾಜ, ಭೂಮಿಕಾಗೆ ಗಾಯಾಳುಗಳು. ಡಿಕ್ಕಿ ರಭಸಕ್ಕೆ ಸ್ಕಾರ್ಪಿಯೋ ಕಾರು ನಜ್ಜುಗುಜ್ಜಾಗಿದ್ದು.. ಶವಗಳನ್ನು ಹೊರತಗೆಯಲು ಕಷ್ಟಪಡಬೇಕಾಯ್ತು. ಸ್ಥಳಕ್ಕೆ ಕೊಪ್ಪಳ ಎಸ್ಪಿ ಭೇಟಿ ನೀಡಿಪರಿಶೀಲಿಸಿದ್ರು.

#publictv #newscafe

Category

🗞
News

Recommended